ಆಧಾರ್ ಅಧ್ಯಕ್ಷ ಸ್ಥಾನಕ್ಕೆ ನಿಲೇಕಣಿ ರಾಜೀನಾಮೆಗೆ ನಿರ್ಧಾರ

ಶುಕ್ರವಾರ, 21 ಫೆಬ್ರವರಿ 2014 (16:23 IST)
PR
PR
ಬೆಂಗಳೂರು: ನಂದನ್ ನಿಲೇಕಣಿ ಅವರು ಆಧಾರ್ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ನಂದನ್ ನಿಲೇಕಣಿ ಅವರು ಬೆಂಗಳೂರು ದಕ್ಷಿಣ ಕ್ಷೇತ್ರದಿಂದ ಸ್ಪರ್ಧಿಸಲು ಹೈಕಮಾಂಡ್ ಹಸಿರು ನಿಶಾನೆ ನೀಡಿರುವುದರಿಂದ ಅವರು ಆಧಾರ್ ಅಧ್ಯಕ್ಷರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆಂದು ಹೇಳಲಾಗುತ್ತಿದೆ. ನಂದನ್ ನಿಲೇಕಣಿ ಅವರು ಬೆಂಗಳೂರು ದಕ್ಷಿಣದಿಂದ ಸ್ಪರ್ಧಿಸುವುದರ ವಿರುದ್ದ ದಿನೇಶ್ ಗುಂಡೂರಾವ್ ಸೇರಿದಂತೆ ಕಾಂಗ್ರೆಸ್ ಮುಖಂಡರ ಒಂದು ಗುಂಪು ಹೈಕಮಾಂಡ್‌ಗೆ ಪತ್ರ ಬರೆದು ಬೆಂಗಳೂರು ದಕ್ಷಿಣದಲ್ಲಿ ನಿಲೇಕಣಿ ಅವರನ್ನು ಕಣಕ್ಕಿಳಿಸುವುದು ಬೇಡವೆಂದು ಹೇಳಿದ್ದರು.

ಆದರೆ ಆಧಾರ್ ಕಾರ್ಡ್ ಯೋಜನೆಯಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದ ನಿಲೇಕಣಿ ಅವರನ್ನೇ ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಸಲು ಹೈಕಮಾಂಡ್ ನಿರ್ಧರಿಸಿರುವುದರಿಂದ ಅವರು ಆಧಾರ್ ಅಧ್ಯಕ್ಷ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರು ದಕ್ಷಿಣದಿಂದ ಬಿಜೆಪಿಯ ಅನಂತ ಕುಮಾರ್ ಸತತವಾಗಿ ಗೆಲವು ಗಳಿಸಿದ್ದು ನಿಲೇಕಣಿ ಅನಂತಕುಮಾರ್‌ಗೆ ತೀವ್ರ ಸೆಡ್ಡು ಹೊಡೆಯುತ್ತಾರೆಂದು ನಿರೀಕ್ಷಿಸಲಾಗಿದೆ.

ವೆಬ್ದುನಿಯಾವನ್ನು ಓದಿ