ಸಚಿವ ಸಂಪುಟ ವಿಸ್ತರಣೆ ಯಾವಾಗ ಎಂದು ತಿಳಿಸಿದ ಸಿಎಂ

ಸೋಮವಾರ, 21 ಸೆಪ್ಟಂಬರ್ 2020 (11:47 IST)
ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಇತ್ತೀಚೆಗೆ ಸಚಿವ ಸಂಪುಟ ವಿಸ್ತರಣೆ ವಿಚಾರ ಕೇಳಿಬರುತ್ತಿದ್ದು, ಈ ಬಗ್ಗೆ ಇದೀಗ ಸಿಎಂ ಬಿಎಸ್ ಯಡಿಯೂರಪ್ಪ ಮಾಹಿತಿ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ನಿಂದ ಇನ್ನೂ ಸೂಚನೆ ಬಂದಿಲ್ಲ. ಸೂಚನೆ ಬಂದ ಬಳಿಕ ಸಂಪುಟ ವಿಸ್ತರಣೆ ಮಾಡುತ್ತೇನೆ ಎಂದು ಹೇಳಿದ್ದಾರೆ.

ಹಾಗೇ ಅಧಿವೇಶನ ಮೊಟಕುಗೊಳಿಸುವ ವಿಚಾರದ ಬಗ್ಗೆ ಮಾತನಾಡಿದ ಅವರು, ಕೊರೊನಾ ಆತಂಕದಿಂದ 50ರಿಂದ 60 ಶಾಸಕರು ಸದನಕ್ಕೆ ಬರುತ್ತಿಲ್ಲ. ಹೀಗಾಗಿ ಬೇಗ ಮುಗಿಸಲು ವಿಪಕ್ಷ ನಾಯಕರ ಸಹಕಾರ ಕೇಳುತ್ತೇನೆ ಎಂದು ತಿಳಿಸಿದ್ದಾರೆ.

ವೆಬ್ದುನಿಯಾವನ್ನು ಓದಿ

ಸಂಬಂಧಿಸಿದ ಸುದ್ದಿ