ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅಧ್ಯಕ್ಷತೆಯಲ್ಲಿ ಶನಿವಾರ ನಡೆದ ಸಂಸದೀಯ ಮಂಡಳಿಯ ಸಭೆಯಲ್ಲಿ ದಿನಾಂಕ ನಿಗದಿ ಮಾಡಲಾಯಿತು. ನರೇಂದ್ರ ಮೋದಿ, ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ್ ಜೋಷಿ, ಸುಷ್ಮಾ ಸ್ವರಾಜ್ ಮತ್ತಿತರರು ಸಭೆಯಲ್ಲಿ ಹಾಜರಿದ್ದರು.
‘ಈ ವಿಜಯದ ಶ್ರೇಯ ನನಗಲ್ಲ, ನಿಮಗೆ ಸಲ್ಲಬೇಕು. ಲಕ್ಷಾಂತರ ಕಾರ್ಯಕರ್ತರ ಕಠಿಣ ಪರಿಶ್ರಮದ ಫಲವಾಗಿ ಇಂಥದ್ದೊಂದು ಅಭೂತಪೂರ್ವ ಗೆಲುವು ನಮಗೆ ಒಲಿದು ಬಂದಿದೆ. 1952ರಿಂದ ಪಕ್ಷಕ್ಕಾಗಿ ದುಡಿದ ನಾಲ್ಕೈದು ತಲೆಮಾರಿನ ಎಲ್ಲ ಮುಖಂಡರಿಗೆ ಹಾಗೂ 125 ಕೋಟಿ ಭಾರತೀಯರಿಗೆ ಈ ಕೀರ್ತಿ ಸಲ್ಲುತ್ತದೆ’ ಎಂದು ಭಾವುಕರಾಗಿ ನುಡಿದರು.