ಯಾವುದೇ ಬಂಡಾಯಕ್ಕೆ ಹೆದುರುವುದಿಲ್ಲ: ಸಿಎಂ ಗರಂ

ಸೋಮವಾರ, 23 ಜನವರಿ 2012 (13:35 IST)
PR
ಬಿಜೆಪಿ ಪಕ್ಷ ಹಲವು ಬಾರಿ ಬಂಡಾಯಗಳನ್ನು ಎದುರಿಸಿದೆ. ಇಂತಹ ಬಂಡಾಯಗಳಿಗೆ ನಾವು ಹೆದರುವುದಿಲ್ಲ ಎಂದು ಮುಖ್ಯಮಂತ್ರಿ ಸದಾನಂದ ಗೌಡ ಹೇಳಿದ್ದಾರೆ.

ಪಕ್ಷದಲ್ಲಿ ಸ್ವಲ್ಪ ಮಟ್ಟಿನ ಗೊಂದಲಗಳಿದ್ದು, ಮುಂಬರುವ ದಿನಗಳಲ್ಲಿ ಪರಿಹಾರವಾಗಲಿವೆ. ಗೊಂದಲಗಳಿಗೆ ಇತಿಶ್ರೀ ಹಾಡಿ ರಾಜ್ಯದ ಅಭಿವೃದ್ಧಿಯತ್ತ ಗಮನಹರಿಸುತ್ತೇನೆ ಎಂದು ತಿಳಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಿಎಸ್‌ವೈ ಮತ್ತು ಅವರ ಬೆಂಬಲಿಗರು ತಮ್ಮ ವಿರುದ್ಧ ನಿರಂತರವಾಗಿ ಹೇಳಿಕೆ ನೀಡುತ್ತಿದ್ದಾರಲ್ಲ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೌಡರು, ಕೋರ್ ಕಮಿಟಿ ಸಭೆಯಲ್ಲಿ ಚರ್ಚಿಸಲಾಗಿದ್ದು, ಸರಕಾರಕ್ಕೆ ಮತ್ತು ಪಕ್ಷಕ್ಕೆ ಮುಜುಗರವಾಗದಂತಹ ಹೇಳಿಕೆಗಳನ್ನು ನೀಡದಂತೆ ಮನವಿ ಮಾಡಲಾಗಿದೆ ಎಂದರು.

ಬಿಜೆಪಿ ಪಕ್ಷದಲ್ಲಿನ ಪಕ್ಷ ವಿರೋಧಿ ಚಟುವಟಿಕೆಗಳಿಂದ ವಿರೋಧ ಪಕ್ಷಗಳಿಗೆ ಬ್ರಹ್ಮಾಸ್ತ್ರ ದೊರೆತಂತಾಗಿದೆ. ಆದರೆ, ನಾವೆಲ್ಲರು ಭಿನ್ನಾಭಿಪ್ರಾಯಗಳನ್ನು ಮರೆತು ರಾಜ್ಯದ ಜನತೆಯ ಆಶೋತ್ತರಗಳಿಗೆ ಸ್ಪಂದಿಸಬೇಕು ಎಂದು ಮುಖ್ಯಮಂತ್ರಿ ಸದಾನಂದ ಗೌಡ ಸಲಹೆ ನೀಡಿದ್ದಾರೆ.

ವೆಬ್ದುನಿಯಾವನ್ನು ಓದಿ