ಮತ್ತೊಮ್ಮೆ ಜನಾರ್ದನ ರೆಡ್ಡಿ ಜಾಮೀನು ಅರ್ಜಿ ವಜಾ

ಮಂಗಳವಾರ, 31 ಜನವರಿ 2012 (17:16 IST)
PR
ನಗರದ ನಾಂಪಲ್ಲಿಯಲ್ಲಿರುವ ಸಿಬಿಐ ವಿಶೇಷ ಕೋರ್ಟ್ ಗಣಿಹಗರಣದ ಆರೋಪಿ ಜನಾರ್ದನ ರೆಡ್ಡಿಯವರ ಜಾಮೀನು ಅರ್ಜಿಯನ್ನು ಮತ್ತೊಮ್ಮೆ ತಿರಸ್ಕರಿಸಿದೆ.

ನಿರಂತರವಾಗಿ ಜಾಮೀನು ಪಡೆಯಲು ಪ್ರಯತ್ನಿಸುತ್ತಿರುವ ಜನಾರ್ದನ ರೆಡ್ಡಿ, ಇದೀಗ ನಾಲ್ಕನೇ ಬಾರಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರು. ಆದರೆ. ಸಿಬಿಐ ವಿಶೇಷ ನ್ಯಾಯಾಲಯ ಮತ್ತೆ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ.

ಸಿಬಿಐ ತನಿಖೆ ಪ್ರಗತಿಯಲ್ಲಿರುವ ಹಂತದಲ್ಲಿ ಒಂದು ವೇಳೆ ಆರೋಪಿಗೆ ಜಾಮೀನು ನೀಡಿದಲ್ಲಿ ಸಾಕ್ಷಿಗಳ ಮೇಲೆ ಪ್ರಭಾವ ಬೀರುವ ಮತ್ತು ಸಾಕ್ಷ್ಯಾಧಾರಗಳನ್ನು ನಾಶಪಡಿಸುವ ಸಾಧ್ಯತೆಗಳಿರುವುದರಿಂದ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸಿಬಿಐ ಕೋರ್ಟ್ ಆದೇಶ ನೀಡಿದೆ.

ಜನಾರ್ದನ ರೆಡ್ಡಿ ಆಪ್ತ ಸಹಾಯಕ ಅಲಿ ಎಂಬಾತನ ಹುಡುಕಾಟದಲ್ಲಿರುವ ಸಿಬಿಐ, ಒಂದು ವೇಳೆ ಅಲಿ ಸಿಬಿಐ ವಶಕ್ಕೆ ಬಂದಲ್ಲಿ ಗಣಿಹಗರಣದ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ ಎಂದು ಸಿಬಿಐ ನ್ಯಾಯಾಲಯಕ್ಕೆ ಮಾಹಿತಿ ನೀಡಿದೆ.

ವೆಬ್ದುನಿಯಾವನ್ನು ಓದಿ