ಬೆಳಗಾವಿ: ಬೆಳಗಾವಿಯ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುವ ರಾಯಭಾಗ ತಾಲೂಕಿನಲ್ಲಿ ಕರ್ತವ್ಯನಿರತರಾಗಿದ್ದ ಚುನಾವಣೆ ಸಿಬ್ಬಂದಿಯೊಬ್ಬರು ಸಾವನ್ನಪ್ಪಿದ ಘಟನೆ ನಡೆದಿದೆ. ಇವರ ಹೆಸರು ಭಾಷಿರ್ ಸಾಬ್ ಜಾರೆ ಎನ್ನಲಾಗಿದ್ದು, ಹೃದಯಾಘಾತದಿಂದ ಮೃತಪಟ್ಟಿದ್ದಾರೆ.
ಕರ್ತವ್ಯ ನಿರ್ವಹಿಸುತ್ತಿದ್ದಾಗ ತೀವ್ರ ಹೃದಯಾಘಾತವಾಗಿ ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗಮಧ್ಯೆದಲ್ಲೇ ಮೃತಪಟ್ಟಿದ್ದಾರೆ. ಬಷೀರ್ ಗೋಕಾಕ ತಾಲೂಕಿನ ಯಾದವಾಡ ನಿವಾಸಿಯಾಗಿದ್ದಾರೆ.