ಕ್ರಿಕೆಟ್: ರಾಹುಲ್ ದ್ರಾವಿಡ್‌ಗೆ ಬಿಸಿಸಿಐ ಸನ್ಮಾನ

ಬುಧವಾರ, 21 ಮಾರ್ಚ್ 2012 (16:57 IST)
PTI
ಇತ್ತೀಚಿಗಷ್ಟೆ ಅಂತಾರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿಯಾದ ಟೀಂ ಇಂಡಿಯಾ ತಂಡದ ಶ್ರೇಷ್ಠ ಬ್ಯಾಟ್ಸ್‌ಮೆನ್ ರಾಹುಲ್ ದ್ರಾವಿಡ್ ಅವರನ್ನು ಸನ್ಮಾನಿಸಲು ಬಿಸಿಸಿಐ ನಿರ್ಧರಿಸಿದೆ ಎಂದು ಮೂಲಗಳು ತಿಳಿಸಿವೆ.

ರಾಹುಲ್ ದ್ರಾವಿಡ್ ಅವರಿಗೆ ಮಾರ್ಚ್ 27 ರಂದು ನಗರದ ತಾಜ್ ಲ್ಯಾಂಡ್ಸ್ ಎಂಡ್ ಹೋಟೆಲ್‌ನಲ್ಲಿ ಸನ್ಮಾನಿಸಲು ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಬಿಸಿಸಿಐ ಹೊರಡಿಸಿದ ಪ್ರಕಟಣೆಯಲ್ಲಿ ಬಹಿರಂಗಪಡಿಸಿದೆ.

ಸನ್ಮಾನ ಕಾರ್ಯಕ್ರಮದಲ್ಲಿ ಟೀಂ ಇಂಡಿಯಾ ತಂಡದ ಸದಸ್ಯರು, ಮಾಜಿ ನಾಯಕರು, ಕ್ರಿಕೆಟಿಗರು ಮತ್ತು ದ್ರಾವಿಡ್ ಕುಟುಂಬದ ಸದಸ್ಯರು ಹಾಗೂ ಬಿಸಿಸಿಐ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಕಳೆದ ಎರಡು ದಶಕಗಳಿಂದ ಕ್ರಿಕೆಟ್ ಕ್ಷೇತ್ರದಲ್ಲಿ ದೇಶ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಯನ್ನು ಪಡೆದ ದ್ರಾವಿಡ್, ಇದೇ ತಿಂಗಳು ಮೇ 9 ರಂದು ಕ್ರಿಕೆಟ್‌ಗೆ ವಿದಾಯ ಘೋಷಿಸಿದ್ದರು.

ವೆಬ್ದುನಿಯಾವನ್ನು ಓದಿ